ಮಂಗಳೂರು: ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿಯವರು ವೆನ್ಲಾಕ್ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು. ಭೇಟಿಯ ಸಂದರ್ಭದಲ್ಲಿ ಶಾಸಕರಾದ ಡಾ. ವೈ ಭರತ್ ಶೆಟ್ಟಿ ಹಾಗೂ ವೇದವ್ಯಾಸ ಕಾಮತ್ ಇದ್ದರು.
ವಾರ್ಡ್ಗೆ ತೆರಳಿದ ಸಚಿವರು ಮತ್ತು ಶಾಸಕರು ರೋಗಿಗಳ ಬಳಿ ಹೋಗಿ ಆಸ್ಪತ್ರೆಯ ಸೌಲಭ್ಯ ಮತ್ತು ಸವಲತ್ತುಗಳ ಬಗ್ಗೆ ವಿಚಾರಿಸಿಕೊಂಡರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಚಂದ್ರ ಬಾಯರಿ, ಡಿಎಂಓ ಸದಾಶಿವ್ ರಾವ್, ಕೆಎಂಸಿ ಆಸ್ಪತ್ರೆಯ ವೈದ್ಯರುಗಳೊಂದಿಗೆ ಇದೇ ಸಂದರ್ಭದಲ್ಲಿ ಸಚಿವರು, ಶಾಸಕರು ತುರ್ತು ಸಭೆ ನಡೆಸಿದರು. ರೋಗಿಗಳಿಗೆ ಸೂಕ್ತ ಚಿಕಿತ್ಸೆ ಹಾಗೂ ಉತ್ತಮ ಸೌಕರ್ಯ ನೀಡಲು ಯೋಗ್ಯ ಕ್ರಮ ಕೈಗೊಳ್ಳುವಂತೆ ವೈದ್ಯಾಧಿಕಾರಿಗಳಿಗೆ ಸೂಚಿಸಲಾಯಿತು.